More

    ಚಿಕ್ಕೋಡಿ | ರಸ್ತೆ ಬದಿ ದೀರ್ಘ ದಂಡ ನಮಸ್ಕಾರ ಮಾಡುತ್ತಿದ್ದ ಯುವತಿಯ ತಲೆ ಮೇಲೆ ಚಲಿಸಿದ ಕಾರು!

    ಚಿಕ್ಕೋಡಿ: ದೇವರಿಗೆ ದೀರ್ಘ ದಂದ ನಮಸ್ಕಾರ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಐಶ್ವರ್ಯ(22) ಮೃತ ಯುವತಿ. ಈ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್; 3 ವಾರ ಯಾವುದೇ ಮುಷ್ಕರ ನಡೆಸದಂತೆ ಆದೇಶ

    ಗ್ರಾಮದ ಜಾತ್ರೆ ಸಂಭ್ರಮದಿಂದ ನಡೆಯುತ್ತಿತ್ತು. ಯುವತಿ ಐಶ್ವರ್ಯ ಜಾತ್ರೆಯ ಸಂದರ್ಭದಲ್ಲಿ ಕೃಷ್ಣಾ ನದಿಯಿಂದ ದೇವಸ್ಥಾನವರಿಗೆ ದೀರ್ಘ ದಂಡ ನಮಸ್ಕಾರ ಹಾಕುತ್ತಾ ಬರುತ್ತಿದ್ದಳು. ಈ ವೇಳೆ ಕಾರು ಬಂದು ಡಿಕ್ಕಿಯಾಗಿದೆ. ತಲೆಯ ಮೇಲೆ ಕಾರು ಸಂಚರಿಸಿದೆ. ಅಪಘಾತದ ತೀವ್ರತೆಗೆ ಯುವತಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ.

    ಮೃತ ಐಶ್ವರ್ಯ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೀರ್ಥ ಗ್ರಾಮದ ನಿವಾಸಿ. ಸದ್ಯ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಅಪಘಾತದ ಬಗ್ಗೆ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹಿಂದುತ್ವದ ಬಗ್ಗೆ ಅವಹೇಳನಕಾರಿ ಪೋಸ್ಟ್; ಜೈಲಿನಲ್ಲಿದ್ದ ಚೇತನ್​ಗೆ ಜಾಮೀನು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts