More

    ಪಿಟಿ ಮೇಸ್ಟ್ರು ಕೈಕೊಟ್ಟಿದ್ದಕ್ಕೆ ಅಂಬೇಡ್ಕರ್​ ವಿರುದ್ಧ ನಾಲಿಗೆ ಹರಿಬಿಟ್ಟ ತುಮಕೂರಿನ ಯುವತಿ ಅರೆಸ್ಟ್​!

    ತುಮಕೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್​. ಅಂಬೇಡ್ಕರ್​ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ಯುವತಿಯನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ.

    ವೇದಾವತಿ (22) ಬಂಧಿತ ಯುವತಿ. ಈಕೆ ಕ್ಯಾತಸಂದ್ರ ಸಮೀಪದ ಕಲ್ಲಹಳ್ಳಿ ಗ್ರಾಮದ ನಿವಾಸಿ.‌ ನನಗೆ ಅನ್ಯಾಯವಾಗಿದೆ. ಇದಕ್ಕೆ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನ ಕಾರಣ ಎನ್ನುತ್ತಾ ಅವಾಚ್ಯ ಶಬ್ದಗಳಿಂದ ಅಂಬೇಡ್ಕರ್​ ಅವರನ್ನು ನಿಂದಿಸಿ, ವಿಡಿಯೋ ಹರಿಬಿಟ್ಟಿದ್ದಳು.

    ಇದನ್ನೂ ಓದಿ: ಸಚಿವ ಸ್ಥಾನಕ್ಕಾಗಿ ಕಸರತ್ತು: ಸಿದ್ದು-ಡಿಕೆಶಿಗೂ ಮುನ್ನವೇ 3 ತಂಡಗಳಾಗಿ ದೆಹಲಿಗೆ ಹಾರಿದ ಶಾಸಕರು

    ವಿಡಿಯೋ ವೈರಲ್​ ಆದ ಬಳಿಕ ವೇದಾವತಿ ವಿರುದ್ಧ ಎನ್.ಇ.ಪಿ.ಎಸ್ ಪೊಲೀಸ್ ಠಾಣೆಗೆ ಶ್ರೀನಿವಾಸ್​ ಎಂಬುವರು ದೂರು ನೀಡಿದ್ದರು. ಇದರ ಆಧಾರದ ಮೇಲೆ ವೇದಾವತಿಯನ್ನು ಬಂಧಿಸಲಾಗಿದೆ. ಪಿಟಿ ಮೇಷ್ಟ್ರು ಮೇಲಿನ ದ್ವೇಷಕ್ಕೆ ಅಂಬೇಡ್ಕರ್​ರನ್ನು ನಿಂದನೆ ಮಾಡಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

    ಕೈಕೊಟ್ಟ ಪಿಟಿ ಮೇಷ್ಟ್ರು

    9ನೇ ತರಗತಿ ಓದುತ್ತಿದ್ದಾಗ ವೇದಾವತಿ ತನ್ನ ಶಾಲೆಯ ದೈಹಿಕ ಶಿಕ್ಷಕನನ್ನು ಪ್ರೀತಿ ಮಾಡುತ್ತಿದ್ದಳು. ಆದರೆ, ದೈಹಿಕ ಶಿಕ್ಷಕ ವಂಚನೆ ಮಾಡಿದ್ದಾನೆ ಎಂದು ಆರೋಪಿಸಿದ್ದಾಳೆ. ಈ ಸಂಬಂಧ ವೇದಾವತಿ ತುಮಕೂರು ಮಹಿಳಾ ಠಾಣೆಗೆ ದೂರು ನೀಡಿದ್ದಳು. ಬಳಿಕ ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು. ಆದರೆ, ನ್ಯಾಯಾಲಯದಲ್ಲಿ ದಾಖಲೆ ಹಾಗೂ ಸಾಕ್ಷಿ ಕೇಳಲಾಗಿತ್ತು.

    ಇದನ್ನೂ ಓದಿ: ಮದುವೆ ದಿನವೇ ವಿಷ ಸೇವಿಸಿ ಸಾವಿಗೆ ಶರಣಾಗಲು ಯತ್ನಿಸಿದ ನೂತನ ದಂಪತಿ; ದುರದೃಷ್ಟವಶಾತ್ ವರ ಯಶಸ್ವಿ…

    ವಿಡಿಯೋ ವೈರಲ್​

    ಸಾಕ್ಷಿ ಕೇಳಿದ್ದರಿಂದ ಬೇಸತ್ತ ವೇದಾವತಿ ಸಂವಿಧಾನ ಬರೆದ ಡಾ. ಬಿ.ಆರ್ ಅಂಬೇಡ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ವಿಡಿಯೋ ಹರಿಬಿಟ್ಟಿದ್ದಳು. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆದ ಬಳಿಕ ಶ್ರೀನಿವಾಸ್​ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ವೇದಾವತಿಯನ್ನು ಬಂಧಿಸಲಾಗಿದೆ. (ದಿಗ್ವಿಜಯ ನ್ಯೂಸ್​)

    ನಾಳೆಯಿಂದ ಸಿಇಟಿ ಪರೀಕ್ಷೆ ಆರಂಭ | ವೃತ್ತಿಪರ ಕೋರ್ಸುಗಳಿಗೆ ಎಂದಿನಂತೆ ಭಾರಿ ಸ್ಪರ್ಧೆ

    ಮದುವೆ ದಿನವೇ ವಿಷ ಸೇವಿಸಿ ಸಾವಿಗೆ ಶರಣಾಗಲು ಯತ್ನಿಸಿದ ನೂತನ ದಂಪತಿ; ದುರದೃಷ್ಟವಶಾತ್ ವರ ಯಶಸ್ವಿ…

    ನಾಳೆ ನೂತನ ಸಿಎಂ ಪ್ರಮಾಣವಚನ; ಬೇರೆ ರಾಜ್ಯಗಳ ಸಿಎಂಗಳಿಗೆ ಕಾಂಗ್ರೆಸ್ ಆಹ್ವಾನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts