ತಿರುವನಂತಪುರಂ: ಕೆಎಸ್ಆರ್ಟಿಸಿ ಬಸ್ನಲ್ಲಿ ಯುವ ವೈದ್ಯೆಗೆ ಗುಪ್ತಾಂಗ ಪ್ರದರ್ಶಿಸಿದ ಆರೋಪದ ಮೇಲೆ 25 ವರ್ಷದ ಯುವಕನೊಬ್ಬನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಕೇರಳದಲ್ಲಿ ಈ ರೀತಿಯ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.
ಬಂಧಿತನನ್ನು ತಮಿಳುನಾಡು ಮೂಲದ ಸೆಲ್ವ ಎಂದು ಗುರುತಿಸಲಾಗಿದೆ. ಈ ಘಟನೆ ಶುಕ್ರವಾರ ರಾತ್ರಿ 8.15ರ ಸುಮಾರಿಗೆ ನಡೆದಿದೆ. ಈತ ಪಟ್ಟೋಮ್ನಲ್ಲಿ ಎಲ್ಐಸಿ ಕಚೇರಿ ಬಳಿ ಇರುವ ಸಸ್ಯಹಾರಿ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ.
26 ವರ್ಷದ ಸಂತ್ರಸ್ತ ವೈದ್ಯೆ ಪಟ್ಟಮ್ ಮರಪ್ಪಲಂನಿಂದ ತೆಂಪನೂರು ರೈಲು ನಿಲ್ದಾಣಕ್ಕೆ ಹೋಗಲು ಕೆಎಸ್ಆರ್ಟಿಸಿ ಬಸ್ ಏರಿದ್ದಳು. ಮೂರು ಮಂದಿ ಕುಳಿತುಕೊಳ್ಳುವ ಸೀಟಿನಲ್ಲಿ ಕುಳಿತಿದ್ದಳು. ಬಸ್ ಚಲಿಸುವಾಗ ಮಾರ್ಗ ಮಧ್ಯೆ ಕಿಟಕಿ ಪಕ್ಕ ಕುಳಿತಿದ್ದ ಯುವಕನ ಕೈ ಚಲನೆಯಲ್ಲಿರುವುದನ್ನು ಗಮನಿಸಿದ್ದಾಳೆ. ಈ ವೇಳೆ ಆತನ ಹಸ್ತಮೈಥುನದಲ್ಲಿ ತೊಡಗಿರುವುದು ಗೊತ್ತಾಗುತ್ತಿದ್ದಂತೆ ಆ ಕಡೆ ನೋಡದೆ ಈ ಕಡೆ ತಿರುಗಿಕೊಂಡಿದ್ದಾಳೆ.
ಇದನ್ನೂ ಓದಿ: ಲವ್ ಬ್ರೇಕಪ್ಗೆ ಒಪ್ಪದ ಪ್ರಿಯಕರನ ಹತ್ಯೆ ಪ್ರಕರಣ: ಆರೋಪಿ ಗ್ರೀಷ್ಮಾ ಬಿಡುಗಡೆ ಡೇಂಜರ್ ಎಂಬ ವಾದ
ಇದಾದ ಬಳಿಕ ಆರೋಪಿ ಸೆಲ್ವ ಯುವ ವೈದ್ಯೆಯ ತೊಡೆಯನ್ನು ಸ್ಪರ್ಶಿಸಿ, ಆಕೆಯ ಕಡೆಯೇ ಮುಖ ಮಾಡಿ ಹಸ್ತಮೈಥುನ ಮಾಡಿಕೊಳ್ಳಲು ಆರಂಭಿಸಿದ್ದಾನೆ. ಇದರಿಂದ ಏನು ಮಾಡಬೇಕೆಂದು ತೋಚದೆ ಅಸಹಾಯಕ ಸ್ಥಿತಿಯಲ್ಲಿದ್ದ ವೈದ್ಯೆ ರೈಲು ನಿಲ್ದಾಣ ಕಡೆ ತೆರೆಳುತ್ತಿದ್ದ ಆಕೆ ವಾಪಸ್ ವಾರ್ಕಳದಲ್ಲಿರುವ ಮನೆಗೆ ಬಂದು ಪಾಲಕರು ಜತೆ ತೆರಳಿ ದೂರು ನೀಡಿದ್ದಾಳೆ. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿ ಕಂಬಿ ಹಿಂದೆ ತಳ್ಳಿದ್ದಾರೆ.
ಪದೇಪದೆ ನಡೆಯುತ್ತಿರುವ ಕೃತ್ಯ
ಕೇರಳದಲ್ಲಿ ಈ ರೀತಿಯ ಘಟನೆಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿರುವುದು ನಿಜಕ್ಕೂ ಆಘಾತಕಾರಿ. ಕೆಲ ದಿನಗಳ ಹಿಂದೆ ಕೇರಳ ನೆಮ್ಮಮ್ ಬಸ್ ನಿಲ್ದಾಣನಿಂದ ಬಸ್ಸನ್ನೇರಿದ ಹುಡುಗಿಗೆ 54 ವರ್ಷ ಜಯನ್ ಎಂಬಾತ ತನ್ನ ಗುಪ್ತಾಂಗ ಪ್ರದರ್ಶಿಸಿದ್ದ. ತನ್ನ ಪಕ್ಕದ ಸೀಟಿನಲ್ಲಿ ಕುಳಿತಿರುವಾಗಲೇ ಆರೋಪಿ ಈ ಕೃತ್ಯ ಎಸಗಿದ್ದ. ಆರಂಭದಲ್ಲಿ ಯುವತಿ ನಿರ್ಲಕ್ಷಿಸಿದಳು. ಆದರೆ, ಅನೇಕ ದೂರದವರೆಗೆ ಆರೋಪಿ ತನ್ನ ಕೃತ್ಯವನ್ನು ಮುಂದುವರಿಸಿದ್ದರಿಂದ ಆಕ್ರೋಶಗೊಂಡ ಯುವತಿ ಬಸ್ನ ಸಿಬ್ಬಂದಿಗೆ ಮಾಹಿತಿ ನೀಡಿದಳು. ಬಳಿಕ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಕರಮಾನಾ ವೃತ್ತ ನಿರೀಕ್ಷಕ ಸುಜಿತ್, ಸಬ್ ಇನ್ಸ್ಪೆಕ್ಟರ್ ಸಂತು ಮತ್ತು ಸಿಪಿಒ ಸಾಜನ್ ಮತ್ತು ಅಭಿಲಾಶ್ ಯುವತಿಯ ಹೇಳಿಕೆಯನ್ನು ಪಡೆದು, ಆರೋಪಿಯನ್ನು ಬಂಧಿಸಿದರು.
ಪಕ್ಕದ ಸೀಟಲ್ಲಿ ಕುಳಿತಿದ್ದ ಯುವತಿಗೆ ಗುಪ್ತಾಂಗ ಪ್ರದರ್ಶಿಸಿದ ಪ್ರಯಾಣಿಕ ಅರೆಸ್ಟ್: KSRTC ಬಸ್ನಲ್ಲಿ ಘಟನೆ
ಇದೇ ಕರಾಳ ಅನುಭವ ನಟಿಗೂ ಆಗಿದೆ
ಕೆಲ ದಿನಗಳ ಹಿಂದೆ ತ್ರಿಸ್ಸೂರು ಮೂಲದ ನಟಿ ನಂದಿತಾ ಶಂಕರ ಅವರು ಬಸ್ನಲ್ಲಿ ನಡೆದ ಘಟನೆಯನ್ನು ವಿಡಿಯೋ ಮೂಲಕ ವಿವರಿಸಿದ್ದಾರೆ. ಈ ಆತಂಕಕಾರಿ ಘಟನೆ ಕಳೆದ ಮಂಗಳವಾರ ನಡೆದಿದೆ. ನಂದಿತಾ ಅವರು ಸಿನಿಮಾ ಶೂಟಿಂಗ್ಗಾಗಿ ಎರ್ನಾಕುಲಂಗೆ ತೆರಳುತ್ತಿದ್ದರು. ಈ ವೇಳೆ ಅಂಗಮಾಲಿ ಬಳಿ ಆರೋಪಿ ಸಾವದ್ ಬಸ್ಸನ್ನು ಏರಿದ. ಬಳಿಕ ಇಬ್ಬರು ಮಹಿಳೆಯರು ಮಧ್ಯೆ ಬಂದು ಕುಳಿತುಕೊಂಡನು. ಆ ಇಬ್ಬರು ಮಹಿಳೆಯರಲ್ಲಿ ನಂದಿತಾ ಅವರು ಕೂಡ ಒಬ್ಬರು. ಬಸ್ ಹೊರಡಲು ಆರಂಭಿಸಿದಾಗ ನಂದಿತಾ ಅವರನ್ನು ಸ್ಪರ್ಶಿಸಲು ಆರಂಭಿಸಿದ್ದಾನೆ.
ಈ ಬಗ್ಗೆ ಮಾತನಾಡಿರುವ ನಂದಿತಾ, ನಾನು ಕಿಟಕಿ ಪಕ್ಕದಲ್ಲಿ ಕುಳಿತಿದ್ದೆ. ಎಲ್ಲಿಗೆ ಹೋಗುತ್ತಿದ್ದೀರಾ ಎಂದು ಕೇಳಿದ. ಆತ ಕೇಳಿದ ಎಲ್ಲದಕ್ಕೂ ನಾನು ಉತ್ತರಿಸಿದೆ. ನೋಡಲು ಆತ ಒಳ್ಳೆಯವನಂತೆ ಕಾಣುತ್ತಿದ್ದ. ಬಸ್ ಕೆಲ ದೂರ ಸಾಗಿದ ಕೂಡಲೇ ಆತನ ಕೈ ನನ್ನ ದೇಹವನ್ನು ಸ್ಪರ್ಶಿಸುತ್ತಿರುವಂತೆ ಭಾಸವಾಯಿತು. ನಾನು ಆತನ ಕಡೆ ನೋಡಿದಾಗ ಆತನ ಒಂದು ಕೈ ಆತನ ಖಾಸಗಿ ಅಂಗದ ಮೇಲಿರುವುದನ್ನು ಗಮನಿಸಿದೆ. ಇದರಿಂದ ನನಗೆ ತೀವ್ರ ಮುಜುಗರವಾಯಿತು. ಬಳಿಕ ಬಸ್ನ ಕಿಟಕಿ ಗಾಜನ್ನು ಮೇಲಕ್ಕೇರಿಸಿ ಆತನಿಂದ ಅಂತರ ಕಾಯ್ದುಕೊಂಡೆ. ಆದರೂ ತನ್ನ ದುಷ್ಕೃತ್ಯ ಮುಂದುವರಿಸಿದ್ದ. ಮತ್ತೆ ನೋಡುವಷ್ಟರಲ್ಲಿ ತನ್ನ ಪ್ಯಾಂಟ್ ಜಿಪ್ ತೆರೆದು ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ. ಈ ಕ್ಷಣದಲ್ಲಿ ಏನು ಮಾಡಬೇಕೆಂದು ತೋಚಲಿಲ್ಲ. ಬಳಿಕ ಮೊಬೈಲ್ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡು ಏನು ನಿನ್ನ ಸಮಸ್ಯೆ ಎಂದು ಆತನನ್ನು ಪ್ರಶ್ನೆ ಮಾಡಿದೆ.
ಪ್ರಶ್ನೆ ಕೇಳುತ್ತಿದ್ದಂತೆಯೇ ಆತ ತಕ್ಷಣ ತನ್ನ ಪ್ಯಾಂಟ್ ಜಿಪ್ ಅನ್ನು ಹಾಕಿಕೊಂಡನು. ನಾನು ನನ್ನ ಧ್ವನಿಯನ್ನು ಜೋರು ಮಾಡಿದೆ. ಈ ವೇಳೆ ಬಸ್ ಸಿಬ್ಬಂದಿ ಬಳಿ ಬಂದರು. ನಡೆದ ಘಟನೆಯನ್ನು ಅವರ ಮುಂದೆ ವಿವರಿಸಿದೆ. ದೂರು ನೀಡುತ್ತೀರಾ ಎಂದು ಬಸ್ ಕಂಡಕ್ಟರ್ ಪ್ರಶ್ನಿಸಿದರು. ನಾನು ಹೌದು ಎಂದೆ. ಈ ವೇಳೆ ಆರೋಪಿ ತನ್ನ ಪ್ಯಾಂಟ್ ಜಿಪ್ ಓಪನ್ ಆಗಿಲ್ಲ ಎಂದು ವಾದಿಸಿದನು. ಬಸ್ ವಿಮಾನ ನಿಲ್ದಾಣದ ಹತ್ತಿರ ನಿಲ್ಲುತ್ತಿದ್ದಂತೆ ಮತ್ತು ಬಸ್ನ ಬಾಗಿಲು ತೆರೆಯುತ್ತಿದ್ದಂತೆ ಓಡಿ ಹೋದ. ಬಳಿಕ ಕಂಡಕ್ಟರ್ ಮತ್ತು ಡ್ರೈವರ್ ಸ್ಥಳೀಯರ ನೆರವಿನಿಂದ ಚೇಸ್ ಮಾಡಿ ಹಿಡಿದರು ಎಂದು ನಂದಿತಾ ಶಂಕರ ನಡೆದ ಘಟನೆಯನ್ನು ವಿಡಿಯೋ ಮೂಲಕ ವಿವರಿಸಿದ್ದಾರೆ. (ಏಜೆನ್ಸೀಸ್)
ಬಸ್ಸಿನಲ್ಲಿ ಮಹಿಳೆಯರಿಬ್ಬರ ಮಧ್ಯೆ ಕುಳಿತು ಕಾಮಚೇಷ್ಟೆ: ವಿಡಿಯೋ ಹರಿಬಿಟ್ಟು ಘಟನೆ ವಿವರಿಸಿದ ನಟಿ