More

    ಮತ್ತೊಂದು ನೀಚ ಕೃತ್ಯ: KSRTC ಬಸ್​ ಏರಿದ ಯುವ ವೈದ್ಯೆಯ ಮುಂದೆಯೇ ವಿಕೃತಿ ಮೆರೆದ ಯುವಕ

    ತಿರುವನಂತಪುರಂ: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಯುವ ವೈದ್ಯೆಗೆ ಗುಪ್ತಾಂಗ ಪ್ರದರ್ಶಿಸಿದ ಆರೋಪದ ಮೇಲೆ 25 ವರ್ಷದ ಯುವಕನೊಬ್ಬನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಕೇರಳದಲ್ಲಿ ಈ ರೀತಿಯ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

    ಬಂಧಿತನನ್ನು ತಮಿಳುನಾಡು ಮೂಲದ ಸೆಲ್ವ ಎಂದು ಗುರುತಿಸಲಾಗಿದೆ. ಈ ಘಟನೆ ಶುಕ್ರವಾರ ರಾತ್ರಿ 8.15ರ ಸುಮಾರಿಗೆ ನಡೆದಿದೆ. ಈತ ಪಟ್ಟೋಮ್​ನಲ್ಲಿ ಎಲ್​ಐಸಿ ಕಚೇರಿ ಬಳಿ ಇರುವ ಸಸ್ಯಹಾರಿ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ.

    26 ವರ್ಷದ ಸಂತ್ರಸ್ತ ವೈದ್ಯೆ ಪಟ್ಟಮ್ ಮರಪ್ಪಲಂನಿಂದ ತೆಂಪನೂರು ರೈಲು ನಿಲ್ದಾಣಕ್ಕೆ ಹೋಗಲು ಕೆಎಸ್​ಆರ್​ಟಿಸಿ ಬಸ್​ ಏರಿದ್ದಳು. ಮೂರು ಮಂದಿ ಕುಳಿತುಕೊಳ್ಳುವ ಸೀಟಿನಲ್ಲಿ ಕುಳಿತಿದ್ದಳು. ಬಸ್​ ಚಲಿಸುವಾಗ ಮಾರ್ಗ ಮಧ್ಯೆ ಕಿಟಕಿ ಪಕ್ಕ ಕುಳಿತಿದ್ದ ಯುವಕನ ಕೈ ಚಲನೆಯಲ್ಲಿರುವುದನ್ನು ಗಮನಿಸಿದ್ದಾಳೆ. ಈ ವೇಳೆ ಆತನ ಹಸ್ತಮೈಥುನದಲ್ಲಿ ತೊಡಗಿರುವುದು ಗೊತ್ತಾಗುತ್ತಿದ್ದಂತೆ ಆ ಕಡೆ ನೋಡದೆ ಈ ಕಡೆ ತಿರುಗಿಕೊಂಡಿದ್ದಾಳೆ.

    ಇದನ್ನೂ ಓದಿ: ಲವ್​ ಬ್ರೇಕಪ್​ಗೆ ಒಪ್ಪದ ಪ್ರಿಯಕರನ ಹತ್ಯೆ​ ಪ್ರಕರಣ: ಆರೋಪಿ ಗ್ರೀಷ್ಮಾ ಬಿಡುಗಡೆ ಡೇಂಜರ್​ ಎಂಬ ವಾದ

    ಇದಾದ ಬಳಿಕ ಆರೋಪಿ ಸೆಲ್ವ ಯುವ ವೈದ್ಯೆಯ ತೊಡೆಯನ್ನು ಸ್ಪರ್ಶಿಸಿ, ಆಕೆಯ ಕಡೆಯೇ ಮುಖ ಮಾಡಿ ಹಸ್ತಮೈಥುನ ಮಾಡಿಕೊಳ್ಳಲು ಆರಂಭಿಸಿದ್ದಾನೆ. ಇದರಿಂದ ಏನು ಮಾಡಬೇಕೆಂದು ತೋಚದೆ ಅಸಹಾಯಕ ಸ್ಥಿತಿಯಲ್ಲಿದ್ದ ವೈದ್ಯೆ ರೈಲು ನಿಲ್ದಾಣ ಕಡೆ ತೆರೆಳುತ್ತಿದ್ದ ಆಕೆ ವಾಪಸ್​ ವಾರ್ಕಳದಲ್ಲಿರುವ ಮನೆಗೆ ಬಂದು ಪಾಲಕರು ಜತೆ ತೆರಳಿ ದೂರು ನೀಡಿದ್ದಾಳೆ. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿ ಕಂಬಿ ಹಿಂದೆ ತಳ್ಳಿದ್ದಾರೆ.

    ಪದೇಪದೆ ನಡೆಯುತ್ತಿರುವ ಕೃತ್ಯ

    ಕೇರಳದಲ್ಲಿ ಈ ರೀತಿಯ ಘಟನೆಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿರುವುದು ನಿಜಕ್ಕೂ ಆಘಾತಕಾರಿ. ಕೆಲ ದಿನಗಳ ಹಿಂದೆ ಕೇರಳ ನೆಮ್ಮಮ್​ ಬಸ್​ ನಿಲ್ದಾಣನಿಂದ ಬಸ್ಸನ್ನೇರಿದ ಹುಡುಗಿಗೆ 54 ವರ್ಷ ಜಯನ್ ಎಂಬಾತ​ ತನ್ನ ಗುಪ್ತಾಂಗ ಪ್ರದರ್ಶಿಸಿದ್ದ. ತನ್ನ ಪಕ್ಕದ ಸೀಟಿನಲ್ಲಿ ಕುಳಿತಿರುವಾಗಲೇ ಆರೋಪಿ ಈ ಕೃತ್ಯ ಎಸಗಿದ್ದ. ಆರಂಭದಲ್ಲಿ ಯುವತಿ ನಿರ್ಲಕ್ಷಿಸಿದಳು. ಆದರೆ, ಅನೇಕ ದೂರದವರೆಗೆ ಆರೋಪಿ ತನ್ನ ಕೃತ್ಯವನ್ನು ಮುಂದುವರಿಸಿದ್ದರಿಂದ ಆಕ್ರೋಶಗೊಂಡ ಯುವತಿ ಬಸ್​ನ ಸಿಬ್ಬಂದಿಗೆ ಮಾಹಿತಿ ನೀಡಿದಳು. ಬಳಿಕ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಕರಮಾನಾ ವೃತ್ತ ನಿರೀಕ್ಷಕ ಸುಜಿತ್​, ಸಬ್​ ಇನ್ಸ್​ಪೆಕ್ಟರ್​ ಸಂತು ಮತ್ತು ಸಿಪಿಒ ಸಾಜನ್​ ಮತ್ತು ಅಭಿಲಾಶ್​ ಯುವತಿಯ ಹೇಳಿಕೆಯನ್ನು ಪಡೆದು, ಆರೋಪಿಯನ್ನು ಬಂಧಿಸಿದರು.

    ಪಕ್ಕದ ಸೀಟಲ್ಲಿ ಕುಳಿತಿದ್ದ ಯುವತಿಗೆ ಗುಪ್ತಾಂಗ ಪ್ರದರ್ಶಿಸಿದ ಪ್ರಯಾಣಿಕ ಅರೆಸ್ಟ್​: KSRTC ಬಸ್​ನಲ್ಲಿ ಘಟನೆ

    ಇದೇ ಕರಾಳ ಅನುಭವ ನಟಿಗೂ ಆಗಿದೆ

    ಕೆಲ ದಿನಗಳ ಹಿಂದೆ ತ್ರಿಸ್ಸೂರು ಮೂಲದ ನಟಿ ನಂದಿತಾ ಶಂಕರ ಅವರು ಬಸ್​ನಲ್ಲಿ ನಡೆದ ಘಟನೆಯನ್ನು ವಿಡಿಯೋ ಮೂಲಕ ವಿವರಿಸಿದ್ದಾರೆ. ಈ ಆತಂಕಕಾರಿ ಘಟನೆ ಕಳೆದ ಮಂಗಳವಾರ ನಡೆದಿದೆ. ನಂದಿತಾ ಅವರು ಸಿನಿಮಾ ಶೂಟಿಂಗ್​ಗಾಗಿ ಎರ್ನಾಕುಲಂಗೆ ತೆರಳುತ್ತಿದ್ದರು. ಈ ವೇಳೆ ಅಂಗಮಾಲಿ ಬಳಿ ಆರೋಪಿ ಸಾವದ್​ ಬಸ್ಸನ್ನು ಏರಿದ. ಬಳಿಕ ಇಬ್ಬರು ಮಹಿಳೆಯರು ಮಧ್ಯೆ ಬಂದು ಕುಳಿತುಕೊಂಡನು. ಆ ಇಬ್ಬರು ಮಹಿಳೆಯರಲ್ಲಿ ನಂದಿತಾ ಅವರು ಕೂಡ ಒಬ್ಬರು. ಬಸ್​ ಹೊರಡಲು ಆರಂಭಿಸಿದಾಗ ನಂದಿತಾ ಅವರನ್ನು ಸ್ಪರ್ಶಿಸಲು ಆರಂಭಿಸಿದ್ದಾನೆ.

    ಈ ಬಗ್ಗೆ ಮಾತನಾಡಿರುವ ನಂದಿತಾ, ನಾನು ಕಿಟಕಿ ಪಕ್ಕದಲ್ಲಿ ಕುಳಿತಿದ್ದೆ. ಎಲ್ಲಿಗೆ ಹೋಗುತ್ತಿದ್ದೀರಾ ಎಂದು ಕೇಳಿದ. ಆತ ಕೇಳಿದ ಎಲ್ಲದಕ್ಕೂ ನಾನು ಉತ್ತರಿಸಿದೆ. ನೋಡಲು ಆತ ಒಳ್ಳೆಯವನಂತೆ ಕಾಣುತ್ತಿದ್ದ. ಬಸ್​ ಕೆಲ ದೂರ ಸಾಗಿದ ಕೂಡಲೇ ಆತನ ಕೈ ನನ್ನ ದೇಹವನ್ನು ಸ್ಪರ್ಶಿಸುತ್ತಿರುವಂತೆ ಭಾಸವಾಯಿತು. ನಾನು ಆತನ ಕಡೆ ನೋಡಿದಾಗ ಆತನ ಒಂದು ಕೈ ಆತನ ಖಾಸಗಿ ಅಂಗದ ಮೇಲಿರುವುದನ್ನು ಗಮನಿಸಿದೆ. ಇದರಿಂದ ನನಗೆ ತೀವ್ರ ಮುಜುಗರವಾಯಿತು. ಬಳಿಕ ಬಸ್​ನ ಕಿಟಕಿ ಗಾಜನ್ನು ಮೇಲಕ್ಕೇರಿಸಿ ಆತನಿಂದ ಅಂತರ ಕಾಯ್ದುಕೊಂಡೆ. ಆದರೂ ತನ್ನ ದುಷ್ಕೃತ್ಯ ಮುಂದುವರಿಸಿದ್ದ. ಮತ್ತೆ ನೋಡುವಷ್ಟರಲ್ಲಿ ತನ್ನ ಪ್ಯಾಂಟ್​ ಜಿಪ್​ ತೆರೆದು ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ. ಈ ಕ್ಷಣದಲ್ಲಿ ಏನು ಮಾಡಬೇಕೆಂದು ತೋಚಲಿಲ್ಲ. ಬಳಿಕ ಮೊಬೈಲ್​ನಲ್ಲಿ ವಿಡಿಯೋ ರೆಕಾರ್ಡ್​ ಮಾಡಿಕೊಂಡು ಏನು ನಿನ್ನ ಸಮಸ್ಯೆ ಎಂದು ಆತನನ್ನು ಪ್ರಶ್ನೆ ಮಾಡಿದೆ.

    ಪ್ರಶ್ನೆ ಕೇಳುತ್ತಿದ್ದಂತೆಯೇ ಆತ ತಕ್ಷಣ ತನ್ನ ಪ್ಯಾಂಟ್​ ಜಿಪ್​ ಅನ್ನು ಹಾಕಿಕೊಂಡನು. ನಾನು ನನ್ನ ಧ್ವನಿಯನ್ನು ಜೋರು ಮಾಡಿದೆ. ಈ ವೇಳೆ ಬಸ್​ ಸಿಬ್ಬಂದಿ ಬಳಿ ಬಂದರು. ನಡೆದ ಘಟನೆಯನ್ನು ಅವರ ಮುಂದೆ ವಿವರಿಸಿದೆ. ದೂರು ನೀಡುತ್ತೀರಾ ಎಂದು ಬಸ್​ ಕಂಡಕ್ಟರ್​ ಪ್ರಶ್ನಿಸಿದರು. ನಾನು ಹೌದು ಎಂದೆ. ಈ ವೇಳೆ ಆರೋಪಿ ತನ್ನ ಪ್ಯಾಂಟ್​ ಜಿಪ್​ ಓಪನ್​ ಆಗಿಲ್ಲ ಎಂದು ವಾದಿಸಿದನು. ಬಸ್​ ವಿಮಾನ ನಿಲ್ದಾಣದ ಹತ್ತಿರ ನಿಲ್ಲುತ್ತಿದ್ದಂತೆ ಮತ್ತು ಬಸ್​ನ ಬಾಗಿಲು ತೆರೆಯುತ್ತಿದ್ದಂತೆ ಓಡಿ ಹೋದ. ಬಳಿಕ ಕಂಡಕ್ಟರ್​ ಮತ್ತು ಡ್ರೈವರ್ ಸ್ಥಳೀಯರ ನೆರವಿನಿಂದ​ ಚೇಸ್​ ಮಾಡಿ ಹಿಡಿದರು ಎಂದು ನಂದಿತಾ ಶಂಕರ ನಡೆದ ಘಟನೆಯನ್ನು ವಿಡಿಯೋ ಮೂಲಕ ವಿವರಿಸಿದ್ದಾರೆ. (ಏಜೆನ್ಸೀಸ್​)

    ಬಸ್ಸಿನಲ್ಲಿ ಮಹಿಳೆಯರಿಬ್ಬರ ಮಧ್ಯೆ ಕುಳಿತು ಕಾಮಚೇಷ್ಟೆ: ವಿಡಿಯೋ ಹರಿಬಿಟ್ಟು ಘಟನೆ ವಿವರಿಸಿದ ನಟಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts