ಚಾಮರಾಜನಗರ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸಂಭವಿಸಿದ ದುರಂತದಲ್ಲಿ ಯುವಕನೊಬ್ಬ ಜೀವಂತ ಸುಟ್ಟುಹೋಗಿದ್ದು, ಶವ ಕರಟಿ ಕರಕಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮಳವಳ್ಳಿ ಗ್ರಾಮದ ಸ್ವಾಮಿ (28) ಸಾವಿಗೀಡಾದ ಯುವಕ. ಮನೆಯಲ್ಲಿ ಅಡುಗೆ ಅನಿಲ ಸೋರಿಕೆ ಹಾಗೂ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಸಂಭವಿಸಿದ ಸ್ಫೋಟದಲ್ಲಿ ಈತ ಸಾವಿಗೀಡಾಗಿದ್ದಾನೆ.
ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ, ಮನೆಯ ಛಾವಣಿ ಕಿತ್ತು ಹಾರಿಹೋಗಿದ್ದು, ಛಾವಣಿಯ ಜಂತಿಗಳು ಸುಟ್ಟು ಕರಕಲಾಗಿದೆ. ಮನೆಯಲ್ಲಿದ್ದ ವಸ್ತುಗಳೆಲ್ಲ ಬೆಂಕಿಗೆ ಆಹುತಿಯಾಗಿವೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.
ಶೂಟ್ ಮಾಡ್ಕೊಂಡು ಉದ್ಯಮಿ ಆತ್ಮಹತ್ಯೆ; ಡೆತ್ನೋಟ್ನಲ್ಲಿತ್ತು ಆ ಇಬ್ಬರ ಹೆಸರು..