More

    ನಡುರಾತ್ರಿ ಪ್ರೇಯಸಿಯ ಮನೆಗೆ ಹೋಗಿ ಸಿಕ್ಕಿಬಿದ್ದ ಯುವಕ; ಮುಂದಾದದ್ದು ಭಾರಿ ದುರಂತ

    ಮುಜಫ್ಫರ್​ಪುರ : ಪ್ರೇಮ ಪ್ರಕರಣದ ಹಿನ್ನೆಲೆಯಲ್ಲಿ, 17 ವರ್ಷದ ಯುವಕನನ್ನು ಹುಡುಗಿಯ ಮನೆಯವರು ಥಳಿಸಿ ಸಾಯಿಸಿ, ಆತನ ಮರ್ಮಾಂಗವನ್ನು ಕತ್ತರಿಸಿ ಹಾಕಿರುವ ಭೀಕರ ಘಟನೆ ಬಿಹಾರದಿಂದ ವರದಿಯಾಗಿದೆ. ಮುಜಫ್ಫರ್​ಪುರ ಜಿಲ್ಲೆಯ ರೇಪುರ ರಾಮಪುರಷಾ ಗ್ರಾಮದ ನಿವಾಸಿಯಾಗಿದ್ದ ಸೌರಭ್ ಕುಮಾರ್ ಕೊಲೆಯಾದ ದುರ್ದೈವಿ.

    ಜುಲೈ 23 ರ ರಾತ್ರಿ ಸೌರಭ್​ ಕುಮಾರ್​ ಪಕ್ಕದ ಸೊರ್ಬರ ಗ್ರಾಮದಲ್ಲಿನ ತನ್ನ ಪ್ರೇಯಸಿಯನ್ನು ಭೇಟಿ ಮಾಡಲು ಆಕೆಯ ಮನೆಗೆ ಹೋಗಿದ್ದ. ಸರಿರಾತ್ರಿಯಲ್ಲಿ ಮನೆಗೇ ಪ್ರವೇಶ ಮಾಡಿದ ಆತನ ಬಗ್ಗೆ ಕೋಪಗೊಂಡ ಹುಡುಗಿಯ ಮನೆಯವರು ಅವನನ್ನು ನಿರ್ದಯವಾಗಿ ಥಳಿಸಿ ಗಂಭೀರವಾಗಿ ಗಾಯಗೊಳಿಸಿದರು ಎನ್ನಲಾಗಿದೆ.

    ಇದನ್ನೂ ಓದಿ: ಚಿತ್ರ ನಿರ್ಮಾಪಕನ​ ವಿರುದ್ಧ ರೇಪ್ ಕೇಸ್; ಕೆಲಸ ನೀಡುವುದಾಗಿ ಹೇಳಿ ವಂಚಿಸಿದ ಆರೋಪ

    ತಕ್ಷಣವೇ ಆತನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾದರೂ ಆತ ಬದುಕುಳಿಯಲಿಲ್ಲ. ಕಾಂತಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಶಂಕಿತ ಆರೋಪಿ ಸುಶಾಂತ್ ಪಾಂಡೆ ಎಂಬುವವನನ್ನು ಬಂಧಿಸಲಾಯಿತು. ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮೃತದೇಹವನ್ನು ಆತನ ಕುಟುಂಬದವರಿಗೆ ಒಪ್ಪಿಸಲಾಯಿತು.

    ಈ ಘೋರ ಕೃತ್ಯದಿಂದ ನೋವುಂಡ ಮೃತನ ಕುಟುಂಬದವರು, ಆರೋಪಿಯ ಮನೆಯ ಮೇಲೆ ದಾಳಿ ನಡೆಸಿದ್ದಲ್ಲದೆ, ಮೃತನ ಅಂತ್ಯಕ್ರಿಯೆಯನ್ನು ಅವರ ಮನೆಯ ಎದುರಿಗೇ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೃತನ ಮೂವರು ಸಂಬಂಧಿಕರು ಪೊಲೀಸರು ಬಂಧಿಸಿದ್ದಾರೆ. ಗ್ರಾಮದಲ್ಲಿ ಉಂಟಾಗಿರುವ ಉದ್ರಿಕ್ತ ಪರಿಸ್ಥಿತಿಯಿಂದಾಗಿ ವಿಶೇಷ ಪೊಲೀಸ್ ಬಂದೋಬಸ್ತ್​ ಮಾಡಲಾಗಿದೆ. (ಏಜೆನ್ಸೀಸ್)

    ದೇಶದ ಅತಿದೊಡ್ಡ ಗನ್​ ಲೈಸೆನ್ಸ್​ ಹಗರಣ ಬೆಳಕಿಗೆ! ಭರದಿಂದ ಸಾಗಿದೆ, ಸಿಬಿಐ ಕಾರ್ಯಾಚರಣೆ!

    ಒಲಿಂಪಿಕ್ಸ್​: ಮೊದಲ ಪಂದ್ಯ ಗೆದ್ದ ವರ್ಲ್ಡ್ ಚ್ಯಾಂಪಿಯನ್ ಪಿ.ವಿ.ಸಿಂಧು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts