More

    ಬಿಪಿ ತಪಾಸಣೆ ವೇಳೆ ಕುಸಿದು ಬಿದ್ದು ಯುವಕ ಸಾವು

    ಮಂಗಳೂರು/ಉಳ್ಳಾಲ: ಖಾಸಗಿ ಆಸ್ಪತ್ರೆಗೆ ಬಿಪಿ ತಪಾಸಣೆಗೆಂದು ಸ್ನೇಹಿತರ ಜತೆಗೆ ತೆರಳಿದ್ದ ಕುಂಪಲ ಆಶ್ರಯ ಕಾಲನಿ ನಿವಾಸಿ ರಾಜೇಶ್ ರಾವ್ (31) ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
    ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಶುಕ್ರವಾರ ದೇರಳಕಟ್ಟೆಯ ಖಾಸಗಿ ಆಸ್ಪತೆಯಲ್ಲಿ ವೈದ್ಯರನ್ನು ಸಂದರ್ಶಿಸಿದ್ದರು. ವೈದ್ಯರು ಸೋಮವಾರ ಮತ್ತೆ ಬರುವಂತೆ ತಿಳಿಸಿದ್ದು, ಅದರಂತೆ ಬೆಳಗ್ಗೆ ಸ್ನೇಹಿತರಾದ ಪ್ರಕಾಶ್ ಕುಂಪಲ, ಶೈಲೇಶ್ ಮೊದಲಾದವರು ಉನ್ನತ ತಪಾಸಣೆಗೆ ಕೆಎಂಸಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆಸ್ಪತ್ರೆಯಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಸ್ನೇಹಿತರ ಮುಂದೆಯೇ ರಾಜೇಶ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.
    ಆಸ್ಪತ್ರೆಗೆ ಬರುವಾಗ ರಾಜೇಶ್ ಅವರೇ ಕಾರು ಚಲಾಯಿಸಿಕೊಂಡು ಬಂದಿದ್ದರು. ರಿಕ್ಷಾ ಚಾಲಕರಾಗಿದ್ದ ಅವರು, ಕುಂಪಲ ಹಿಂದು ಜಾಗರಣ ವೇದಿಕೆ ಸದಸ್ಯರಾಗಿದ್ದರು. ತಂದೆ, ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts