More

    ಚಲಿಸುತ್ತಿದ್ದ ಬಸ್ ಚಕ್ರಕ್ಕೆ ತಲೆ ಕೊಟ್ಟು ಪ್ರಾಣಬಿಟ್ಟ ಯುವಕ; ಭಯಬಿದ್ದು ಓಡಿದ ಜನರು

    ವಿಜಯಪುರ: ಚಲಿಸುವ ಬಸ್​ನ ಹಿಂಬದಿ ಚಕ್ರದಡಿ ಸಿಲುಕಿ ಯುವಕನೋರ್ವನೋರ್ವ ಅಸುನೀಗಿರುವ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ಯುವಕನ ಸಾವು ಆತಂಕದ ಜೊತೆಗೆ ಅಚ್ಚರಿಗೆ ಕಾರಣವಾಗಿದೆ.

    ವಿಜಯಪುರ ನಗರದಲ್ಲಿರುವ ಕೇಂದ್ರ ಬಸ್​ ನಿಲ್ದಾಣದ ಬಳಿ ಇರುವ ಟಿಪ್ಪು ಸುಲ್ತಾನ್​ ವೃತ್ತದಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಮೃತರು ಹಾಸನ ಮೂಲದವರು ಎಂದು ತಿಳಿದು ಬಂದಿದೆ. ಸಿಸಿಟಿವಿ ದೃಶ್ಯಾವಳಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

    Vijayapura Bus

    ಇದನ್ನೂ ಓದಿ: ವಾಹನ ಸವಾರರು ಗಮನಿಸಿ; ಪೀಣ್ಯ ಫ್ಲೈಓವರ್​ನಲ್ಲಿ ನಾಲ್ಕು ದಿನಗಳ ಕಾಲ ಸಂಚಾರ ಸ್ಥಗಿತ

    ವೈರಲ್​ ಆಗಿರುವ ವಿಡಿಯೋದಲ್ಲಿ ರಸ್ತೆಬದಿ ಫೋನಿನಲ್ಲಿ ಮಾತನಾಡುತ್ತ ನಿಂತಿರುವ ಯುವಕ ಬಸ್​ ಬರುತ್ತಿದ್ದಂತೆ ಏಕಾಏಕಿ ತನ್ನ ಕೈಯಲ್ಲಿದ್ದ ಮೊಬೈಲ್​ ಎಸೆದು ಹಿಂಬದಿ ಚಕ್ರದಡಿ ಬಿದ್ದಿದ್ದಾನೆ. ತಲೆ ಮೇಲೆ ಚಕ್ರ ಹರಿದು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆ. ಈ ಎಲ್ಲ ದೃಶ್ಯಾವಳಿಗಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆತ್ಮಹತ್ಯೆ ಮಾಡಿಕೊಳ್ಳಲೆಂದೇ ಯುವಕ ಹಿಂದಿನ ಚಕ್ರಕ್ಕೆ ತಲೆ ಕೊಟ್ಟಿದ್ಧಾನೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ.

    ಸ್ಥಳದಲ್ಲಿ ಯುವಕನ ಮೊಬೈಲ್​ ಪತ್ತೆಯಾಗಿದ್ದು, ಆತನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಸಂಚಾರಿ ಠಾಣೆ ಪೊಲೀಸರು ಮೃತ ಯುವಕನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts