ಚಿಕ್ಕಬಳ್ಳಾಪುರ: ಮಚ್ಚಿನಿಂದ ಕೊಚ್ಚಿ ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ಗೌರಿ ಬಿದನೂರು ತಾಲ್ಲೂಕಿನ ಚಿಕ್ಕಕುರುಗೋಡು ಬಳಿ ನಡೆದಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಕುರುಬರಹಳ್ಳಿ ನಿವಾಸಿ ಮಂಜುನಾಥ್ (29) ಹತ್ಯೆಯಾದ ವ್ಯಕ್ತಿ. ಭಾನುವಾರ ಮುಂಜಾನೆ ಘಟನೆ ನಡೆದಿದೆ. ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಯುವಕನನ್ನು ರಸ್ತೆ ಬದಿ ಬಿಸಾಡಿ ಪರಾರಿಯಾಗಿದ್ದಾರೆ.
ಇದನ್ನೂ ಓದಿ: ಅಂತ್ಯಸಂಸ್ಕಾರದ ಬೆನ್ನಲ್ಲೇ ಸಮಾಧಿಯಿಂದ ಹೆಣ್ಣುಮಗುವಿನ ಮೃತದೇಹ ಕಿತ್ತು ರಸ್ತೆಗೆಸೆದ ಧರ್ಮಾಂಧರು!
ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕನನ್ನು ಆಸ್ಪತ್ರೆಗೆ ಸಾರ್ವಜನಿಕರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಯುವಕ ಸಾವಿಗೀಡಾಗಿದ್ದಾನೆ. ಈ ಸಂಬಂಧ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. (ದಿಗ್ವಿಜಯ ನ್ಯೂಸ್)
ಬೆಂಗಳೂರಿನಲ್ಲಿ ಮಾಸ್ಕ್ ಹಾಕದವರಿಗೆ ಬಿದ್ದದ್ದು ಒಂದು ಕೋಟಿ ರೂಪಾಯಿ ದಂಡ!