ಕೊಚ್ಚಿ: ಕೇರಳದ ಕೆಎಸ್ಆರ್ಟಿಸಿ ಬಸ್ನಲ್ಲಿ ಮಲಯಾಳಂ ನಟಿ ಹಾಗೂ ಮಾಡೆಲ್ಗೆ ಖಾಸಗಿ ಅಂಗ ಪ್ರದರ್ಶಿಸಿದ ಆರೋಪದ ಮೇಲೆ 27 ವರ್ಷದ ಯುವಕನೊಬ್ಬನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಸಾವದ್ ಎಂದು ಗುರುತಿಸಲಾಗಿದೆ. ಈತ ಕೋಯಿಕ್ಕೊಡ್ನ ಕಯಾಕೋಡಿ ನಿವಾಸಿ. ಬಂಧಿತನಿಗೆ 14 ದಿನಗಳ ರಿಮ್ಯಾಂಡ್ನಲ್ಲಿ ಇರಿಸಲಾಗಿದೆ. ಬಸ್ನಿಂದ ಇಳಿದು ತಪ್ಪಿಸಿಕೊಂಡು ಓಡುವಾಗ ಸ್ಥಳೀಯರು ಮತ್ತು ಬಸ್ ಸಿಬ್ಬಂದಿ ಬೆನ್ನಟ್ಟಿ ಹೋಗಿ ಸೆರೆಹಿಡಿದಿದ್ದಾರೆ.
ವಿಡಿಯೋ ಮೂಲಕ ವಿವರಣೆ
ಇದೇ ಸಂದರ್ಭದಲ್ಲಿ ತ್ರಿಸ್ಸೂರು ಮೂಲದ ನಟಿ ನಂದಿತಾ ಶಂಕರ ಅವರು ಬಸ್ನಲ್ಲಿ ನಡೆದ ಘಟನೆಯನ್ನು ವಿಡಿಯೋ ಮೂಲಕ ವಿವರಿಸಿದ್ದಾರೆ. ಇದುವರೆಗೂ ಆ ವಿಡಿಯೋವನ್ನು 12 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಣೆ ಮಾಡಿದ್ದಾರೆ. ಅನೇಕರು ನಂದಿತಾ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ತಮಗಾದ ಅದೇ ರೀತಿಯ ಘಟನೆಗಳನ್ನು ಹಂಚಿಕೊಂಡಿದ್ದಾರೆ.
ಅಂಗಮಾಲಿ ಬಳಿ ಬಸ್ ಏರಿದ
ಈ ಆತಂಕಕಾರಿ ಘಟನೆ ಮಂಗಳವಾರ ನಡೆದಿದೆ. ನಂದಿತಾ ಅವರು ಸಿನಿಮಾ ಶೂಟಿಂಗ್ಗಾಗಿ ಎರ್ನಾಕುಲಂಗೆ ತೆರಳುತ್ತಿದ್ದರು. ಈ ವೇಳೆ ಅಂಗಮಾಲಿ ಬಳಿ ಆರೋಪಿ ಸಾವದ್ ಬಸ್ಸನ್ನು ಏರಿದ. ಬಳಿಕ ಇಬ್ಬರು ಮಹಿಳೆಯರು ಮಧ್ಯೆ ಬಂದು ಕುಳಿತುಕೊಂಡನು. ಆ ಇಬ್ಬರು ಮಹಿಳೆಯರಲ್ಲಿ ನಂದಿತಾ ಅವರು ಕೂಡ ಒಬ್ಬರು. ಬಸ್ ಹೊರಡಲು ಆರಂಭಿಸಿದಾಗ ನಂದಿತಾ ಅವರನ್ನು ಸ್ಪರ್ಶಿಸಲು ಆರಂಭಿಸಿದ್ದಾನೆ.
ಪ್ಯಾಂಟ್ ಜಿಪ್ ತೆರೆದು ಹಸ್ತಮೈಥುನ
ಈ ಬಗ್ಗೆ ಮಾತನಾಡಿರುವ ನಂದಿತಾ, ನಾನು ಕಿಟಕಿ ಪಕ್ಕದಲ್ಲಿ ಕುಳಿತಿದ್ದೆ. ಎಲ್ಲಿಗೆ ಹೋಗುತ್ತಿದ್ದೀರಾ ಎಂದು ಕೇಳಿದ. ಆತ ಕೇಳಿದ ಎಲ್ಲದಕ್ಕೂ ನಾನು ಉತ್ತರಿಸಿದೆ. ನೋಡಲು ಆತ ಒಳ್ಳೆಯವನಂತೆ ಕಾಣುತ್ತಿದ್ದ. ಬಸ್ ಕೆಲ ದೂರ ಸಾಗಿದ ಕೂಡಲೇ ಆತನ ಕೈ ನನ್ನ ದೇಹವನ್ನು ಸ್ಪರ್ಶಿಸುತ್ತಿರುವಂತೆ ಭಾಸವಾಯಿತು. ನಾನು ಆತನ ಕಡೆ ನೋಡಿದಾಗ ಆತನ ಒಂದು ಕೈ ಆತನ ಖಾಸಗಿ ಅಂಗದ ಮೇಲಿರುವುದನ್ನು ಗಮನಿಸಿದೆ. ಇದರಿಂದ ನನಗೆ ತೀವ್ರ ಮುಜುಗರವಾಯಿತು. ಬಳಿಕ ಬಸ್ನ ಕಿಟಕಿ ಗಾಜನ್ನು ಮೇಲಕ್ಕೇರಿಸಿ ಆತನಿಂದ ಅಂತರ ಕಾಯ್ದುಕೊಂಡೆ. ಆದರೂ ತನ್ನ ದುಷ್ಕೃತ್ಯ ಮುಂದುವರಿಸಿದ್ದ. ಮತ್ತೆ ನೋಡುವಷ್ಟರಲ್ಲಿ ತನ್ನ ಪ್ಯಾಂಟ್ ಜಿಪ್ ತೆರೆದು ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ. ಈ ಕ್ಷಣದಲ್ಲಿ ಏನು ಮಾಡಬೇಕೆಂದು ತೋಚಲಿಲ್ಲ. ಬಳಿಕ ಮೊಬೈಲ್ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡು ಏನು ನಿನ್ನ ಸಮಸ್ಯೆ ಎಂದು ಆತನನ್ನು ಪ್ರಶ್ನೆ ಮಾಡಿದೆ.
ಇದನ್ನೂ ಓದಿ: ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಮುಂದಿವೆ ಸಾಲು ಸಾಲು ಸವಾಲುಗಳು!
ಬಸ್ನ ಬಾಗಿಲು ತೆರೆಯುತ್ತಿದ್ದಂತೆ ಎಸ್ಕೇಪ್
ಪ್ರಶ್ನೆ ಕೇಳುತ್ತಿದ್ದಂತೆಯೇ ಆತ ತಕ್ಷಣ ತನ್ನ ಪ್ಯಾಂಟ್ ಜಿಪ್ ಅನ್ನು ಹಾಕಿಕೊಂಡನು. ನಾನು ನನ್ನ ಧ್ವನಿಯನ್ನು ಜೋರು ಮಾಡಿದೆ. ಈ ವೇಳೆ ಬಸ್ ಸಿಬ್ಬಂದಿ ಬಳಿ ಬಂದರು. ನಡೆದ ಘಟನೆಯನ್ನು ಅವರ ಮುಂದೆ ವಿವರಿಸಿದೆ. ದೂರು ನೀಡುತ್ತೀರಾ ಎಂದು ಬಸ್ ಕಂಡಕ್ಟರ್ ಪ್ರಶ್ನಿಸಿದರು. ನಾನು ಹೌದು ಎಂದೆ. ಈ ವೇಳೆ ಆರೋಪಿ ತನ್ನ ಪ್ಯಾಂಟ್ ಜಿಪ್ ಓಪನ್ ಆಗಿಲ್ಲ ಎಂದು ವಾದಿಸಿದನು. ಬಸ್ ವಿಮಾನ ನಿಲ್ದಾಣದ ಹತ್ತಿರ ನಿಲ್ಲುತ್ತಿದ್ದಂತೆ ಮತ್ತು ಬಸ್ನ ಬಾಗಿಲು ತೆರೆಯುತ್ತಿದ್ದಂತೆ ಓಡಿ ಹೋದ. ಬಳಿಕ ಕಂಡಕ್ಟರ್ ಮತ್ತು ಡ್ರೈವರ್ ಸ್ಥಳೀಯರ ನೆರವಿನಿಂದ ಚೇಸ್ ಮಾಡಿ ಹಿಡಿದರು ಎಂದು ನಂದಿತಾ ಶಂಕರ ನಡೆದ ಘಟನೆಯನ್ನು ವಿಡಿಯೋ ಮೂಲಕ ವಿವರಿಸಿದ್ದಾರೆ. (ಏಜೆನ್ಸೀಸ್)
ಪ್ರತಿನಿತ್ಯ ಒಂದೊಂದು ಕೋಳಿ ಮೊಟ್ಟೆ ತಿಂತೀರಾ? ಹಾಗಿದ್ರೆ ಈ ಸುದ್ದಿ ಓದಿ…
ಕೈ ತಪ್ಪಿದ ಡಿಸಿಎಂ ಸ್ಥಾನಕ್ಕೆ ಪಟ್ಟು ಹಿಡಿದ ಜಿ.ಪರಮೇಶ್ವರ್; ಹೈಕಮಾಂಡ್ ಜತೆ ಚರ್ಚಿಸಲು ಸಧ್ಯದಲ್ಲೇ ದೆಹಲಿಗೆ ಪ್ರಯಾಣ!