More

    ಬಸ್ಸಿನಲ್ಲಿ ಮಹಿಳೆಯರಿಬ್ಬರ ಮಧ್ಯೆ ಕುಳಿತು ಕಾಮಚೇಷ್ಟೆ: ವಿಡಿಯೋ ಹರಿಬಿಟ್ಟು ಘಟನೆ ವಿವರಿಸಿದ ನಟಿ

    ಕೊಚ್ಚಿ: ಕೇರಳದ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಮಲಯಾಳಂ ನಟಿ ಹಾಗೂ ಮಾಡೆಲ್​ಗೆ ಖಾಸಗಿ ಅಂಗ ಪ್ರದರ್ಶಿಸಿದ ಆರೋಪದ ಮೇಲೆ 27 ವರ್ಷದ ಯುವಕನೊಬ್ಬನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

    ಆರೋಪಿಯನ್ನು ಸಾವದ್​ ಎಂದು ಗುರುತಿಸಲಾಗಿದೆ. ಈತ ಕೋಯಿಕ್ಕೊಡ್​ನ ಕಯಾಕೋಡಿ ನಿವಾಸಿ. ಬಂಧಿತನಿಗೆ 14 ದಿನಗಳ ರಿಮ್ಯಾಂಡ್​ನಲ್ಲಿ ಇರಿಸಲಾಗಿದೆ. ಬಸ್​ನಿಂದ ಇಳಿದು ತಪ್ಪಿಸಿಕೊಂಡು ಓಡುವಾಗ ಸ್ಥಳೀಯರು ಮತ್ತು ಬಸ್​ ಸಿಬ್ಬಂದಿ ಬೆನ್ನಟ್ಟಿ ಹೋಗಿ ಸೆರೆಹಿಡಿದಿದ್ದಾರೆ.

    ಇದನ್ನೂ ಓದಿ: ಕೈ ತಪ್ಪಿದ ಡಿಸಿಎಂ ಸ್ಥಾನಕ್ಕೆ ಪಟ್ಟು ಹಿಡಿದ ಜಿ.ಪರಮೇಶ್ವರ್; ಹೈಕಮಾಂಡ್ ಜತೆ ಚರ್ಚಿಸಲು ಸಧ್ಯದಲ್ಲೇ ದೆಹಲಿಗೆ ಪ್ರಯಾಣ!

    ವಿಡಿಯೋ ಮೂಲಕ ವಿವರಣೆ

    ಇದೇ ಸಂದರ್ಭದಲ್ಲಿ ತ್ರಿಸ್ಸೂರು ಮೂಲದ ನಟಿ ನಂದಿತಾ ಶಂಕರ ಅವರು ಬಸ್​ನಲ್ಲಿ ನಡೆದ ಘಟನೆಯನ್ನು ವಿಡಿಯೋ ಮೂಲಕ ವಿವರಿಸಿದ್ದಾರೆ. ಇದುವರೆಗೂ ಆ ವಿಡಿಯೋವನ್ನು 12 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಣೆ ಮಾಡಿದ್ದಾರೆ. ಅನೇಕರು ನಂದಿತಾ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ತಮಗಾದ ಅದೇ ರೀತಿಯ ಘಟನೆಗಳನ್ನು ಹಂಚಿಕೊಂಡಿದ್ದಾರೆ.

    ಅಂಗಮಾಲಿ ಬಳಿ ಬಸ್​ ಏರಿದ

    ಈ ಆತಂಕಕಾರಿ ಘಟನೆ ಮಂಗಳವಾರ ನಡೆದಿದೆ. ನಂದಿತಾ ಅವರು ಸಿನಿಮಾ ಶೂಟಿಂಗ್​ಗಾಗಿ ಎರ್ನಾಕುಲಂಗೆ ತೆರಳುತ್ತಿದ್ದರು. ಈ ವೇಳೆ ಅಂಗಮಾಲಿ ಬಳಿ ಆರೋಪಿ ಸಾವದ್​ ಬಸ್ಸನ್ನು ಏರಿದ. ಬಳಿಕ ಇಬ್ಬರು ಮಹಿಳೆಯರು ಮಧ್ಯೆ ಬಂದು ಕುಳಿತುಕೊಂಡನು. ಆ ಇಬ್ಬರು ಮಹಿಳೆಯರಲ್ಲಿ ನಂದಿತಾ ಅವರು ಕೂಡ ಒಬ್ಬರು. ಬಸ್​ ಹೊರಡಲು ಆರಂಭಿಸಿದಾಗ ನಂದಿತಾ ಅವರನ್ನು ಸ್ಪರ್ಶಿಸಲು ಆರಂಭಿಸಿದ್ದಾನೆ.

    ಪ್ಯಾಂಟ್​ ಜಿಪ್​ ತೆರೆದು ಹಸ್ತಮೈಥುನ

    ಈ ಬಗ್ಗೆ ಮಾತನಾಡಿರುವ ನಂದಿತಾ, ನಾನು ಕಿಟಕಿ ಪಕ್ಕದಲ್ಲಿ ಕುಳಿತಿದ್ದೆ. ಎಲ್ಲಿಗೆ ಹೋಗುತ್ತಿದ್ದೀರಾ ಎಂದು ಕೇಳಿದ. ಆತ ಕೇಳಿದ ಎಲ್ಲದಕ್ಕೂ ನಾನು ಉತ್ತರಿಸಿದೆ. ನೋಡಲು ಆತ ಒಳ್ಳೆಯವನಂತೆ ಕಾಣುತ್ತಿದ್ದ. ಬಸ್​ ಕೆಲ ದೂರ ಸಾಗಿದ ಕೂಡಲೇ ಆತನ ಕೈ ನನ್ನ ದೇಹವನ್ನು ಸ್ಪರ್ಶಿಸುತ್ತಿರುವಂತೆ ಭಾಸವಾಯಿತು. ನಾನು ಆತನ ಕಡೆ ನೋಡಿದಾಗ ಆತನ ಒಂದು ಕೈ ಆತನ ಖಾಸಗಿ ಅಂಗದ ಮೇಲಿರುವುದನ್ನು ಗಮನಿಸಿದೆ. ಇದರಿಂದ ನನಗೆ ತೀವ್ರ ಮುಜುಗರವಾಯಿತು. ಬಳಿಕ ಬಸ್​ನ ಕಿಟಕಿ ಗಾಜನ್ನು ಮೇಲಕ್ಕೇರಿಸಿ ಆತನಿಂದ ಅಂತರ ಕಾಯ್ದುಕೊಂಡೆ. ಆದರೂ ತನ್ನ ದುಷ್ಕೃತ್ಯ ಮುಂದುವರಿಸಿದ್ದ. ಮತ್ತೆ ನೋಡುವಷ್ಟರಲ್ಲಿ ತನ್ನ ಪ್ಯಾಂಟ್​ ಜಿಪ್​ ತೆರೆದು ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ. ಈ ಕ್ಷಣದಲ್ಲಿ ಏನು ಮಾಡಬೇಕೆಂದು ತೋಚಲಿಲ್ಲ. ಬಳಿಕ ಮೊಬೈಲ್​ನಲ್ಲಿ ವಿಡಿಯೋ ರೆಕಾರ್ಡ್​ ಮಾಡಿಕೊಂಡು ಏನು ನಿನ್ನ ಸಮಸ್ಯೆ ಎಂದು ಆತನನ್ನು ಪ್ರಶ್ನೆ ಮಾಡಿದೆ.

    ಇದನ್ನೂ ಓದಿ: ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಮುಂದಿವೆ ಸಾಲು ಸಾಲು ಸವಾಲುಗಳು!

    ಬಸ್​ನ ಬಾಗಿಲು ತೆರೆಯುತ್ತಿದ್ದಂತೆ ಎಸ್ಕೇಪ್​

    ಪ್ರಶ್ನೆ ಕೇಳುತ್ತಿದ್ದಂತೆಯೇ ಆತ ತಕ್ಷಣ ತನ್ನ ಪ್ಯಾಂಟ್​ ಜಿಪ್​ ಅನ್ನು ಹಾಕಿಕೊಂಡನು. ನಾನು ನನ್ನ ಧ್ವನಿಯನ್ನು ಜೋರು ಮಾಡಿದೆ. ಈ ವೇಳೆ ಬಸ್​ ಸಿಬ್ಬಂದಿ ಬಳಿ ಬಂದರು. ನಡೆದ ಘಟನೆಯನ್ನು ಅವರ ಮುಂದೆ ವಿವರಿಸಿದೆ. ದೂರು ನೀಡುತ್ತೀರಾ ಎಂದು ಬಸ್​ ಕಂಡಕ್ಟರ್​ ಪ್ರಶ್ನಿಸಿದರು. ನಾನು ಹೌದು ಎಂದೆ. ಈ ವೇಳೆ ಆರೋಪಿ ತನ್ನ ಪ್ಯಾಂಟ್​ ಜಿಪ್​ ಓಪನ್​ ಆಗಿಲ್ಲ ಎಂದು ವಾದಿಸಿದನು. ಬಸ್​ ವಿಮಾನ ನಿಲ್ದಾಣದ ಹತ್ತಿರ ನಿಲ್ಲುತ್ತಿದ್ದಂತೆ ಮತ್ತು ಬಸ್​ನ ಬಾಗಿಲು ತೆರೆಯುತ್ತಿದ್ದಂತೆ ಓಡಿ ಹೋದ. ಬಳಿಕ ಕಂಡಕ್ಟರ್​ ಮತ್ತು ಡ್ರೈವರ್ ಸ್ಥಳೀಯರ ನೆರವಿನಿಂದ​ ಚೇಸ್​ ಮಾಡಿ ಹಿಡಿದರು ಎಂದು ನಂದಿತಾ ಶಂಕರ ನಡೆದ ಘಟನೆಯನ್ನು ವಿಡಿಯೋ ಮೂಲಕ ವಿವರಿಸಿದ್ದಾರೆ. (ಏಜೆನ್ಸೀಸ್​)

    ಪ್ರತಿನಿತ್ಯ ಒಂದೊಂದು ಕೋಳಿ ಮೊಟ್ಟೆ ತಿಂತೀರಾ? ಹಾಗಿದ್ರೆ ಈ ಸುದ್ದಿ ಓದಿ…

    ಕೈ ತಪ್ಪಿದ ಡಿಸಿಎಂ ಸ್ಥಾನಕ್ಕೆ ಪಟ್ಟು ಹಿಡಿದ ಜಿ.ಪರಮೇಶ್ವರ್; ಹೈಕಮಾಂಡ್ ಜತೆ ಚರ್ಚಿಸಲು ಸಧ್ಯದಲ್ಲೇ ದೆಹಲಿಗೆ ಪ್ರಯಾಣ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts