ಗೋಕರ್ಣ: ಮೊಬೈಲ್ನಲ್ಲಿ ಮಾತನಾಡದಂತೆ ಬುದ್ಧಿವಾದ ಹೇಳಿದ್ದಕ್ಕೆ ಮನಸ್ಸಿಗೆ ಹಚ್ಚಿಕೊಂಡ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹತ್ತಿರದ ಹನೇಹಳ್ಳಿಯಲ್ಲಿ ಸೋಮವಾರ ನಡೆದಿದೆ.
ಮೃತ ಯುವಕನನ್ನು ವಿಕಾಸ ಚಂದ್ರು ಆಗೇರ(18) ಎಂದು ಗುರುತಿಸಲಾಗಿದೆ. ಮನೆಯ ದೇವರ ಕೋಣೆಯ ಜಂತಿಗೆ ನೈಲಾನ್ ಬಟ್ಟೆಯಿಂದ ನೇಣು ಹಾಕಿಕೊಂಡಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.