ಬೆಂಗಳೂರು: ಅಪಘಾತದಿಂದ ಉಂಟಾದ ಗಾಯದ ನೋವು ಸಹಿಸದೇ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಬ್ರಮಣ್ಯಪುರ ಠಾಣಾ ವ್ಯಾಪ್ತಿಯ ಗೌಡನಪಾಳ್ಯದಲ್ಲಿ ಭಾನುವಾರ ನಡೆದಿದೆ.
ನವೀನ್ (23) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ. ಇಂದು ಬೆಳಗ್ಗೆ ಮನೆಯ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ನವೀನ್ ಮೂಲತಃ ರಾಮನಗರದ ಕನಕಪುರ ತಾಲೂಕಿನ ಬೆಟ್ಟದಹಲಸೂರು ಗ್ರಾಮದ ನಿವಾಸಿ.
ನವೀನ್ ಉತ್ತರಹಳ್ಳಿ ಮುಖ್ಯರಸ್ತೆಯ ಮಂಜುನಾಥ್ ಫರ್ನಿಚರ್ನಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚೆಗಷ್ಟೇ ಅಪಘಾತದಲ್ಲಿ ಕಾಲಿಗೆ ಗಂಭೀರವಾದ ಗಾಯವಾಗಿತ್ತು. ಇದೀಗ ನೋವು ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)