ಶಿವಮೊಗ್ಗ: ಕಳೆದ ಕೆಲ ದಿನಗಳಿಂದ ಮಲೆನಾಡಿನಲ್ಲಿ ಬಾರಿ ಮಳೆಯಾಗುತ್ತಿದ್ದು, ತುಂಗಾ ಜಲಾಶಯದಲ್ಲಿ ಒಳಹರಿವು ಹೆಚ್ಚಳವಾಗಿದ್ದು, ಅಪಾಯ ಮಟ್ಟ ಮೀರಿ ಹರಿಯುತ್ತಿದೆ.ಈ ಹಿನ್ನಲೆಯಲ್ಲಿ ಶಿವಮೊಗ್ಗ ತಾಲ್ಲೂಕಿನ ಗಾಜನೂರಿನಲ್ಲಿರುವ ತುಂಗಾ ಜಲಾಶಯದ 21 ಕ್ರಸ್ಟ್ ಗೇಟ್ಗಳ ಮೂಲಕ ನೀರನ್ನು ಬಿಡುಗಡೆ ಮಾಡಲಾಗಿತ್ತು.
ಇದೀಗ ಅಪಾಯ ಮ್ಟ ಮೀರಿ ಹರಿಯುತ್ತಿರುವ ತುಂಗಾ ನದಿಯಲ್ಲಿ ಯುವಕನೋರ್ವ ಹುಚ್ಚಾಟ ಆಡಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹುಚ್ಚಾಟ ಮೆರೆದ ಯುವಕನನ್ನು ಗಂಗಪ್ಪ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಮಾತನಾಡುವ ವೇಳೆ ಮೈಕ್ರೋಫೋನ್ ಆಫ್; ಸಭಾತ್ಯಾಗ ಮಾಡಿದ ವಿಪಕ್ಷಗಳು
ವೈರಲ್ ಆಗಿರುವ ವಿಡಿಯೋದಲ್ಲಿ ಯುವಕ ಮೊದಲೊಇಗೆ ನದಿಗೆ ಹಾರುವ ಯುವಕ ಕೆಲಕಾಲ ನೀರಿನಲ್ಲಿ ಮುಳುಗಿ ಬಳಿಕ ಈಜಿ ದಡ ಸೇರುತ್ತಾನೆ. ಇತ್ತ ಯುವಕನ ಹುಚ್ಚಾಟವನ್ನು ಪಾದಚಾರಿಯೊಬ್ಬರು ಸೆರೆ ಹಿಡಿದಿದ್ದು, ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಇತ್ತ ವಿಡಿಯೋ ವೈರಲ್ ಆದ ಬೆನ್ನಲ್ಲೇ ಯುವಕನ ಹುಚ್ಚಾಟಕ್ಕೆ ನೆಟ್ಟಿಗರು ಕಿಡಿಕಾರಿದ್ದು, ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.