More

    ವಿಶ್ವಕಪ್​ ಕ್ರಿಕೆಟ್​ನಲ್ಲಿ ಭಾರತ ಸೋತಿದ್ದಕ್ಕೆ ಬೇಜಾರಾಗಿ ಸತ್ತ ಯುವಕ!

    ಬಂಕುರ: ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಿನ್ನೆ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಏಕದಿನ ವಿಶ್ವಕಪ್​ ಕ್ರಿಕೆಟ್​ನ ಫೈನಲ್ ಪಂದ್ಯದಲ್ಲಿ ಭಾರತ ಸೋತು ವಿಶ್ವಕಪ್ ಕೈತಪ್ಪಿ ಹೋಗಿದೆ. ಇನ್ನು ಭಾರತವೇ ಗೆಲ್ಲುತ್ತದೆ ಎಂದು ಬೆಟ್ ಕಟ್ಟಿ ಯಾರ್ಯಾರು ಏನೇನು ಕಳೆದುಕೊಂಡಿದ್ದಾರೋ? ಆದರೆ ಇಲ್ಲೊಬ್ಬ ಯುವಕ ಭಾರತ ಸೋತ ಬೇಜಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಪಶ್ಚಿಮಬಂಗಾಳದ ಬಂಕುರ ಜಿಲ್ಲೆಯ ರಾಹುಲ್ ಲೋಹರ್ ಎಂಬ 23 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡವ. ಈತ ಸ್ಥಳೀಯ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಬೆಲಿಯತೋರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಈ ಪ್ರಕರಣ ನಡೆದಿದೆ.

    ಇದನ್ನೂ ಓದಿ: ಎಂ. ಚಿನ್ನಸ್ವಾಮಿ ಸ್ಟೇಡಿಯಂ ಎಲ್ಲರಿಗೂ ಗೊತ್ತು: ಆದರೆ ಈ ಕ್ರೀಡಾಂಗಣಕ್ಕೆ ಯಾಕೆ ಆ ಹೆಸರು ಬಂತು?

    ನಿನ್ನೆ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದ ಹಿನ್ನೆಲೆಯಲ್ಲಿ ಕೆಲಸಕ್ಕೆ ರಜೆ ಹಾಕಿದ್ದು, ಪಂದ್ಯದಲ್ಲಿ ಭಾರತ ಸೋತ ಬಳಿಕ ಈ ಸಾವಿಗೆ ಶರಣಾಗಿದ್ದಾನೆ. ಕ್ರಿಕೆಟ್ ಹೊರತಾಗಿ ಆತನಿಗೆ ಬೇರೆ ಯಾವುದೇ ಅಂಥ ಅಟ್ಯಾಚ್​​ಮೆಂಟ್ ಇರಲಿಲ್ಲ ಈತನ ಸಂಬಂಧಿ ಪೊಲೀಸರಿಗೆ ತಿಳಿಸಿದ್ದಾನೆ.

    ಇದನ್ನೂ ಓದಿ: ಪ್ರೀತಿ ಇದ್ದರೂ ಪತ್ನಿ ಯಾಕೆ ಪತಿಯಿಂದ ವಿಮುಖಳಾಗುತ್ತಾಳೆ?; ಇದು ವಿವಾಹಿತರಿಗೊಂದು ಕಿವಿಮಾತು, ಎಚ್ಚರಿಕೆ ಕೂಡ!

    ಪೊಲೀಸರು ಇದನ್ನ ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ಇಂದು ಈತನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಕ್ರಿಕೆಟ್​ನಲ್ಲಿ ಭಾರತ ಸೋತಿದ್ದಕ್ಕೇ ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದ್ದರೂ ಪೊಲೀಸರು ಬೇರೆ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ.

    ವಿಶ್ವಕಪ್ ಸೋಲು: ಬದಲಾಗಲಿದ್ಯಾ ಭಾರತ ಕ್ರಿಕೆಟ್ ತಂಡದ ನಾಯಕತ್ವ?; ಮುಂದೆ ಮಹತ್ವ ಯಾರಿಗೆ?

    ಖ್ಯಾತ ಬೌಲರ್​ಗೆ ಮೋದಿಯ ಸಾಂತ್ವನದ ಅಪ್ಪುಗೆ: ನಾವು ಮತ್ತೆ ಪುಟಿದೇಳುತ್ತೇವೆ ಎಂದ ಶಮಿ; ವೈರಲ್ ಆಗುತ್ತಿದೆ ಫೋಟೋ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts