ಚಿಕ್ಕಮಗಳೂರು: ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಿರುವ ವೈಎಸ್ವಿ ದತ್ತಾಗೆ ಅವರು ಕಡೂರು ಕ್ಷೇತ್ರದಿಂದ ಸ್ಪರ್ಧಿಸುಲು ಸಜ್ಜಾಗಿದ್ದರು. ಆದರೆ ಇಂದು ಬಿಡುಗಡೆಯಾದ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲ ದತ್ತಾ ಹೆಸರು ಇರಲಿಲ್ಲ. ಇದೀಗ ಕಾಂಗ್ರೆಸ್ನಿಂದ ಟಿಕೆಟ್ ಕೈತಪ್ಪುತ್ತಿದ್ದಂತೆ ವೈಎಸ್ವಿ ದತ್ತಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಜ್ಜಾಗಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.
ಇದನ್ನೂ ಓದಿ: ಏ. 9 ರಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ | ಗೆಲ್ಲುವ ಪಕ್ಷವಾದ್ದರಿಂದ ಟಿಕೆಟ್ಗಾಗಿ ಪೈಪೋಟಿ ಸಹಜ; ಸಿಎಂ ಬೊಮ್ಮಾಯಿ
ಪಕ್ಷೇತರ ಅಭ್ಯರ್ಥಿಯಾಗಿ ವೈಎಸ್ ವಿ ದತ್ತ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಕಾರ್ಯಕರ್ತರ ಸಭೆಯಲ್ಲಿ ಸ್ಪರ್ಧೆ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ. ಅಪ್ತರು ಹಾಗೂ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ವೈಎಸ್ವಿ ದತ್ತಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ.
ಟಿಕೆಟ್ ತಪ್ಪಿದ ಹಿನ್ನೆಲೆ ದತ್ತಾ ಅವರ ಬೆಂಬಲಿಗರು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸದ್ಯ ವೈಎಸ್ವಿ ದತ್ತಾ ಅವರು ಒಪ್ಪಿಗೆ ನೀಡಿದ್ದು, ಅವರ ನಿರ್ಧಾರಕ್ಕೆ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.
ಇದನ್ನೂ ಓದಿ: ವಿಜಯಪುರ | 70 ಅಡಿ ಎತ್ತರದ ರಥದ ಮೇಲಿಂದ ಬಿದ್ದು ವ್ಯಕ್ತಿ ಮೃತ್ಯು
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕುರಿತಾಗಿ ವೈಎಸ್ವಿ ದತ್ತಾ ಮಾತನಾಡಿದ್ದಾರೆ ಎನ್ನಲಾಗಿದ್ದ ಆಡಿಯೋವೊಂದು ಈ ಹಿಂದೆ ವೈರಲ್ ಆಗಿತ್ತು. ಇದು ಸಾಕಷ್ಟು ವಿರೋಧಕ್ಕೆ ಕಾರಣವಾಗಿತ್ತು. ಇದರಿಂದಾಗಿ ವೈಎಸ್ವಿ ದತ್ತಾ ಅವರಿಕೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದೆ ಎಂದು ಅಂದಾಜಿಸಲಾಗಿದೆ.