ಬೆಂಗಳೂರು: ‘ಯುವರತ್ನ’ ಚಿತ್ರದ ಬಿಡುಗಡೆ ಯಾವಾಗ ಎಂಬ ಪುನೀತ್ ರಾಜಕುಮಾರ್ ಅಭಿಮಾನಿಗಳ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಚಿತ್ರವನ್ನು ಏಪ್ರಿಲ್ 01ರ ಗುರುವಾರ ಬಿಡುಗಡೆ ಮಾಡಬೇಕೆಂದು ಚಿತ್ರತಂಡ ನಿರ್ಧರಿಸಿದ್ದು, ಶುಕ್ರವಾರ ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತಾಗಿ ಅಧಿಕೃತವಾಗಿ ಘೋಷಿಸಿದೆ.
ಎರಡು ಹಾಡುಗಳನ್ನು ಹೊರತುಪಡಿಸಿ, ‘ಯುವರತ್ನ’ ಚಿತ್ರದ ಬಹುತೇಕ ಚಿತ್ರೀಕರಣ ಕಳೆದ ಮಾರ್ಚ್ನಲ್ಲೇ ಮುಕ್ತಾಯವಾಗಿತ್ತು. ಇನ್ನು ಹಾಡುಗಳ ಚಿತ್ರೀಕರಣಕ್ಕೆ ವಿದೇಶಕ್ಕೆ ಹೋಗಬೇಕು ಎನ್ನುವಷ್ಟರಲ್ಲಿ ಲಾಕ್ಡೌನ್ ಘೋಷಣೆಯಾಯಿತು. ಲಾಕ್ಡೌನ್ ಮುಗಿದು ಚಿತ್ರೀಕರಣ ಚಟುವಟಿಕೆಗಳು ಪ್ರಾರಂಭವಾದ ನಂತರ ‘ಯುವರತ್ನ’ ಚಿತ್ರತಂಡವು ಹಾಡುಗಳ ಚಿತ್ರೀಕರಣ ಮಾಡಿ ಮುಗಿಸಿದ್ದು, ಇದೀಗ ಪೋಸ್ಟ್ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಈ ಮಧ್ಯೆ, ಚಿತ್ರ ಬಿಡುಗಡೆಯ ಅಧಿಕೃತ ಘೋಷಣೆಯಾಗಿದ್ದು, ಏಪ್ರಿಲ್ 1 ರಂದು ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ. ಪುನೀತ್ಗೆ ನಾಯಕಿಯಾಗಿ ಸಾಯೇಷಾ ಸೈಗಲ ನಟಿಸಿದ್ದು, ಮಿಕ್ಕಂತೆ ಧನಂಜಯ್, ದಿಗಂತ್, ಸೋನು ಮುಂತಾದವರು ನಟಿಸಿದ್ದಾರೆ. ಸಂತೋಷ್ ಆನಂದರಾಮ್ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ಹೊಂಬಾಳೆ ಫಿಲಂಸ್ನಡಿ ವಿಜಯ್ ಕುಮಾರ್ ಕಿರಗಂದೂರು ನಿರ್ವಿುಸಿದ್ದಾರೆ.
ಕೆಜಿಎಫ್ ನಿರ್ದೇಶಕರೇ ‘ಹುಟ್ಟು’ ಹಾಕಿದರು; ರವಿ ಬಸ್ರೂರ್ಗಿಂದು ಒಂದಲ್ಲ ಎರಡು ಹುಟ್ಟುಹಬ್ಬ!
ಸ್ನೇಹಿತನ ಕೊಂದು ಶವದ ಜತೆ ಊರೆಲ್ಲಾ ಸುತ್ತಾಡಿದ: ಸಿಸಿಟಿವಿಯಲ್ಲಿ ದೃಶ್ಯ ಸೆರೆ