ನವದೆಹಲಿ: ಟೀಂ ಇಂಡಿಯಾದ ಮಾಜಿ ಆಲ್ರೌಂಡರ್, 2011ರ ವಿಶ್ವಕಪ್ ಹೀರೋ ಯುವರಾಜ್ ಸಿಂಗ್ ಇದೀಗ ಮತ್ತೊಮ್ಮೆ ಸುದ್ದಿಯಾಗಿದ್ದು, ಈ ಬಾರಿ ನಡೆಯಲಿರುವ ಟಿ-20 ವಿಶ್ವಕಪ್ನ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಇದು ಅವರ ಅಪಾರ ಅಭಿಮಾನಿ ಬಳಗಕ್ಕೆ ಅತೀವ ಸಂತಸ ಉಂಟುಮಾಡಿದೆ.
ಇದನ್ನೂ ಓದಿ: ಬೆಂ. ಗ್ರಾಮಾಂತರ ಮತದಾನ ಮುಕ್ತಾಯ
ಇತ್ತೀಚೆಗಷ್ಟೇ ವೆಸ್ಟ್ ಇಂಡೀಸ್ನ ಮಾಜಿ ಆಟಗಾರ, ಸ್ಪೋಟಕ ಬ್ಯಾಟ್ಸ್ಮನ್ ಕ್ರಿಸ್ ಗೇಲ್ ಮತ್ತು ಒಲಂಪಿಕ್ ಚಿನ್ನದ ಪದಕ ವಿಜೇತ ಉಸೇನ್ ಬೋಲ್ಟ್ ಇಬ್ಬರು ಟಿ-20 ವಿಶ್ವಕಪ್ 2024ರ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾಗಿದ್ದರು. ಇವರಿಬ್ಬರ ಬೆನ್ನಲ್ಲೇ ಇದೀಗ ಯುವರಾಜ್ ಸಿಂಗ್ ನೇಮಕಗೊಂಡಿದ್ದಾರೆ. ವಿಶ್ವಕಪ್ಗೆ ಸಂಬಂಧಿಸಿದಂತೆ ಮುಂಬರುವ ಎಲ್ಲಾ ಪ್ರಚಾರ ಕಾರ್ಯಕ್ರಮಗಳಲ್ಲಿ ಯುವಿ ಭಾಗವಹಿಸುವ ಹಿನ್ನೆಲೆ ಈ ಮಾಹಿತಿ ಇದೀಗ ಹೊರಬಿದ್ದಿದೆ.
2007ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಭಾರತ ಚೊಚ್ಚಲ ಟಿ-20 ವಿಶ್ವಕಪ್ ಟ್ರೋಫಿಯನ್ನು ಗೆದ್ದಿತು. ಈ ಗೆಲುವಿನಲ್ಲಿ ಯುವರಾಜ್ ಪ್ರಮುಖ ಪಾತ್ರ ವಹಿಸಿದ್ದರು. ಅಂದು 6 ಪಂದ್ಯಗಳಲ್ಲಿ ಕೇವಲ 148 ರನ್ ಗಳಿಸಿದ್ದ ಯುವಿ, 194.74 ಸ್ಟ್ರೈಕ್ ರೇಟ್ ಅನ್ನು ಉಳಿಸಿಕೊಂಡಿದ್ದರು. ಎಡಗೈ ಬ್ಯಾಟ್ಸ್ಮನ್ ಆಗಿ ಡರ್ಬನ್ನಲ್ಲಿ ಇಂಗ್ಲೆಂಡ್ನ ವಿರುದ್ಧ ಕಣಕ್ಕಿಳಿದಿದ್ದ ಯುವರಾಜ್ ಸಿಂಗ್, ಸ್ಟುವರ್ಟ್ ಬ್ರಾಡ್ ಓವರ್ನಲ್ಲಿ ಆರು ಬಾಲ್ಗಳಿಗೆ ಆರು ಸಿಕ್ಸರ್ ಸಿಡಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸಿದರು. (ಏಜೆನ್ಸೀಸ್).
ನಿಮಗೆ ಏನೂ ಗೊತ್ತಿಲ್ಲ… RCB ಪ್ಲೇಆಫ್ ಕನಸು ಇನ್ನೂ ಜೀವಂತ: ವಿಲ್ ಜ್ಯಾಕ್ಸ್ ಬಿಚ್ಚಿಟ್ರು ಶಾಕಿಂಗ್ ಸಂಗತಿ
IPL 2024: RCB ವಿರುದ್ಧ ಸೋತರೂ ತಲೆತಗ್ಗಿಸದ ಸನ್ರೈಸರ್ಸ್! ಅದಕ್ಕೂ ಒಂದು ಕಾರಣವಿದೆ