More

    ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿ

    ಝಳಕಿ: ನೂತನವಾಗಿ ಆಯ್ಕೆಯಾಗಿರುವ ಎಲ್ಲ ಗ್ರಾಪಂ ಸದಸ್ಯರು ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರೇಶ ಗೋಣಸಗಿ ಹೇಳಿದರು.

    ಸಮೀಪದ ಶಿಗಣಾಪುರ ಗ್ರಾಮದಲ್ಲಿ ಬುಧವಾರ ಹಮ್ಮಿಕೊಂಡಿದ್ದ ನೂತನ ಗ್ರಾಮ ಪಂಚಾಯಿತಿ ಸದಸ್ಯರಿಗೆ ಸನ್ಮಾನಿಸಿ ಅವರು ಮಾತನಾಡಿದರು.

    ನಂದರಗಿ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿಯ ಶಿಗಣಾಪುರ, ಧೂಮಕನಾಳ ಗ್ರಾಮಗಳಲ್ಲಿ ಚರಂಡಿ, ಸಿಸಿ ರಸ್ತೆ, ಮನೆಗೊಂದು ಶೌಚಗೃಹ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕೆಂದು ತಿಳಿಸಿದರು.

    ಗ್ರಾಪಂನ ಸದಸ್ಯ ಪ್ರಕಾಶಗೌಡ ಪಾಟೀಲ ಮಾತನಾಡಿ, ನಾವು ಗ್ರಾಮಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುತ್ತೇವೆ. ಗ್ರಾಮಗಳ ಅಭಿವೃದ್ಧಿಯೇ ನಮ್ಮ ಗುರಿಯಾಗಿದೆ ಎಂದರು.

    ಗ್ರಾಪಂ ಅಧ್ಯಕ್ಷ ಅಪ್ಪುಗೌಡ ಪಾಟೀಲ, ಉಪಾಧ್ಯಕ್ಷ ಶಿಲ್ಪಾ ಬಿರಾದಾರ, ಸದಸ್ಯ ಚಂದ್ರಕಾಂತ ನಂದಗೊಂಡ, ಪ್ರಕಾಶಗೌಡ ಪಾಟೀಲ, ಸಂಗೀತಾ ದೊಡಮನಿ, ಮುಖಂಡರಾದ ಅಪ್ಪಾಸಾಹೇಬ ಬಡಿಗೇರ, ಮದನ ಪಾಟೀಲ, ನಿರಂಜನ ಪಾಟೀಲ, ಸಿ.ಕೆ.ಪಾಟೀಲ, ರಾಜುಗೌಡ ಪಾಟೀಲ, ಸಿದ್ದಣ್ಣ ಪಟ್ಟಣಶೆಟ್ಟಿ, ಗೋವಿಂದ ಜಾಧವ, ಸತೀಶ ದೇವಕತೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts