More

    ಜಿಲ್ಲಾ ಪಂಚಾಯತಿ ಅಧ್ಯಕ್ಷೆ ದಲಿತೆ ಎಂದು ಸಭೆಗೆ ಸದಸ್ಯರು ಗೈರು

    ಹಾಸನ: ನಾನು ದಲಿತ ವರ್ಗಕ್ಕೆ ಸೇರಿದವಳು ಎಂಬ ಕಾರಣಕ್ಕೆ ಜೆಡಿಎಸ್ ಸದಸ್ಯರು ಸಾಮಾನ್ಯ ಸಭೆಗೆ ಗೈರಾಗಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್ ಆರೋಪಿಸಿದ್ದಾರೆ. ನಾನು ಜಿಪಂ ಅಧ್ಯಕ್ಷ ಸ್ಥಾನ ಅಲಂಕರಿಸಿರುವುದನ್ನು ಕೆಲವರಿಗೆ ಸಹಿಸಲು ಆಗುತ್ತಿಲ್ಲ. ಆದ್ದರಿಂದ ಸತತ ಮೂರು ಸಾಮಾನ್ಯ ಸಭೆಗೆ ಕೋರಂ ಕೊರತೆಯಾಗುವಂತೆ ನೋಡಿಕೊಂಡರು ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೆಸರು ಹೇಳದೆ ಟಾಂಗ್ ನೀಡಿದ್ದಾರೆ. ದಲಿತ ಅಧ್ಯಕ್ಷೆ ಎಂಬ ಕಾರಣಕ್ಕೆ ಎಲ್ಲ ಸದಸ್ಯರು ಸಭೆ ಬಹಿಷ್ಕಾರ ಮಾಡುತ್ತಿದ್ದಾರೆ. ಎಲ್ಲೋ ಒಂದು ಕಡೆ ಕೂತು ಹಾಸನ ಅಭಿವೃದ್ಧಿ ಆಗುತ್ತಿಲ್ಲ ಎಂದು ಹೇಳುತ್ತಾರೆ. ನಿಯಮಿತವಾಗಿ ನಡೆಯುವ ಸಭೆಗಳಿಗೆ ಗೈರಾಗುತ್ತಾರೆ. ಕಾಂಗ್ರೆಸ್​ನ ನೆರವಿನಿಂದ ಮಗನನ್ನು ಸಂಸದರಾಗಿ ಮಾಡಿದ್ದಾರೆಂಬುದನ್ನು ಮರೆತ್ತಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಲಾಭ ಪಡೆದು ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದು ರೇವಣ್ಣ ವಿರುದ್ಧ ಹರಿಹಾಯ್ದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts