More

    ಬೆಳಗಾವಿ ಜಿಪಂನಲ್ಲಿ ಡಾ: ಬಿ.ಆರ್. ಅಂಬೇಡ್ಕರ ಜಯಂತಿ ಆಚರಣೆ

    ಬೆಳಗಾವಿ: ನಗರದ ಜಿಪಂ ಕಾರ್ಯಾಲಯದಲ್ಲಿ ಭಾನುವಾರ ಡಾ. ಬಿ.ಆರ್. ಅಂಬೇಡ್ಕರ ಅವರ 133ನೇ ಜನ್ಮ ದಿನ ನಿಮಿತ್ತ ಅವರ ಭಾವಚಿತ್ರಕ್ಕೆ ಜಿಪಂ ಸಿಇಒ ರಾಹುಲ್ ಶಿಂಧೆ ಪೂಜೆ ಸಲ್ಲಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಅವರು, ಡಾ: ಬಾಬಾ ಸಾಹೇಬ ಅಂಬೇಡ್ಕರ ಅವರು ದೇಶಕ್ಕೆ ನೀಡಿದ ಕೊಡುಗೆ ಅಪಾರವಾಗಿದ್ದು, ಅವರು ಹಾಕಿ ಕೊಟ್ಟ ಭದ್ರ ಬುನಾದಿಯಲ್ಲಿ ಇವತ್ತು ನಾವೆಲ್ಲ ಸಾಗುತ್ತಿದ್ದೇವೆ. ಇವರ ಆದರ್ಶಗಳು ಕೇವಲ ಜಯಂತಿಗೆ ಸೀಮಿತವಾಗದೇ ಪ್ರತಿ ನಿತ್ಯ ಎಲ್ಲರೂ ಅಳವಡಿಸಿಕೊಳ್ಳಬೇಕೆಂದು ಎಂದು ತಿಳಿಸಿದರು.

    ಜಿ.ಪಂ. ಉಪ ಕಾರ್ಯದರ್ಶಿ ಬಸವರಾಜ ಅಡವಿಮಠ, ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ, ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ, ಲೆಕ್ಕಾಧಿಕಾರಿ ಗಂಗಾ ಹಿರೇಮಠ, ಅಕ್ಷರದಾಸೋಹ ಕ್ಷೇತ್ರ ಶಿಕ್ಷಣಾಧಿಕಾರಿ ಯಕ್ಕುಂಡಿ, ಸಹಾಯಕ ನಿರ್ದೇಶಕಿ ಜಯಶ್ರೀ ನಂದೇನ್ನವರ, ಶಾಖಾ ವ್ಯವಸ್ಥಾಪಕರು ಹಾಗೂ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts